ಕನ್ನಡ ನಾಡಲಿ
- shreepadns
- Nov 28, 2023
- 1 min read
ಕನ್ನಡ ನಾಡಲಿ ಹುಟ್ಟಲು ಬಹಳ ಪುಣ್ಯವು ಬೇಕು ಗೆಳೆಯ
ಕನ್ನಡ ನಾಡದು ರೂಪಿತವಾಗಿ ಪಾವನಗೊಳಿಸಿತು ಇಳೆಯ
ನಮ್ಮೀ ನೆಲದ ಮಣ್ಣದು ಗಂಧ ತುಂಬಿದೆ ಚಂದನ ಶ್ರೀಗಂಧ
ಸುಂದರ ಭಾಷೆ ಬರೆಯಲು ಅಂದ ನುಡಿಯದು ಕೇಳಲು ಕರ್ಣಾನಂದ
ಸಾವಿರ ಸಾವಿರ ವರುಷಕೂ ಹಳೆಯದು
ನಮ್ಮೀ ತಾಯ್ನುಡಿಯು
ಕನ್ನಡವೆಂದರೆ ಹೆಮ್ಮೆಯು ಇರಲಿ ಆಗಲಿ ನಮ್ಮೆದೆಯೇ ಗುಡಿಯು
ನಾಡಿಗೆ ಪಾವನ ನದಿಗಳ ಸಂಗ ಶಿಲ್ಪಕಲೆಯು ಉತ್ತುಂಗ
ಜನಿಸಿದರೆನಿತೊ ವಿಶ್ವಖ್ಯಾತರು ಕನ್ನಡ ನಾಡಿನ ತುಂಬ
ಕನ್ನಡ ಭಾಷೆಯ ಬಳಸುತ ನಾವು ನುಡಿಯನು ಬೆಳೆಸೋಣ
ತೊಲಗಿಸಿ ಮನದ ಕೀಳರಿಮೆಯನು ಕನ್ನಡ ಉಳಿಸೋಣ"
©ವೆಂಕಟೇಶ ಬೈಲೂರು
ನಮ್ಮ ನಡುವಿನ ಭರವಸೆಯ ಕವಿ,ಬರಹಗಾರ ಶ್ರೀ ವೆಂಕಟೇಶ ಬೈಲೂರು ಅವರ "ಕನ್ನಡ ನಾಡಲಿ" ಎಂಬ ಕವಿತೆ ನಿಮ್ಮ ಓದು ಮತ್ತು ಪ್ರತಿಸ್ಪಂದನಕ್ಕಾಗಿ.
ಡಾ.ಶ್ರೀಪಾದ ಶೆಟ್ಟಿ ಸಂಪಾದಕ ಆಲೋಚನೆ.ಕಾಂ

Comments