top of page

ತೊಟ್ಟು-೩೬೨

ವಿಪರ್ಯಾಸ!

------------------

ಕೋಗಿಲೆಯ

ಗೂಡಲ್ಲಿ

ಕಾಗೆ

ಮೊಟ್ಟೆ

ಇಟ್ಟು,

ಹುಟ್ಟಿದ

ಮರಿ ಕಾಗೆ,

ಒಳಗಿನ

ಬಳಗವನ್ನೇ

ಹೊರಗಟ್ಟಿತು!

ಪಂಚಮದಲಿ

ಒರಲುತ್ತ

ಮನೆಗಾಗಿ

ಹುಡುಕುವ

ಕೋಗಿಲೆ,

ಕಣ್ಣೀರಿಟ್ಟಿತು!!


ಡಾ. ಬಸವರಾಜ ಸಾದರ.

Recent Posts

See All
ಮಾತನಾಡುವ ಕಷ್ಟ!

ಹೌದು, ಮಾತೇ ಆಡಬೇಡ ಅಂದರೆ ಅಂಬೋರಿಗೇನು ಅನ್ನುವುದು? ಅಂತಾ ದಿನವೊಂದಿತ್ತು-- --ಮೊದಲ ಮಾತಿಗೆ ಎಷ್ಟು ಕಾತರ ಇತ್ತಲ್ಲ!:- ಸುತ್ತಲೂ ಕಾದವರ ತೆರೆದ ಕಿವಿಗೆ!? ಒಂದು ಸಲ...

 
 
 
ಬೆಪ್ಪುತಕ್ಕಡಿ

ಬೆಂಡಾದ ತರಾಜು, ತೂಗೀತೆ ಸಮೃದ್ಧಿ ತುಂಬಿದ ಭಾಜನ-ಭಾಂಡ? ಹುಳುಕು ತೂಗಿ ಕೊಳಕಾದ ತ್ರಾಸಿಗೆ ತಿಳಿದೀತು ಹೇಗೆ ಬೆಳಕಿನ ಬ್ರಹ್ಮಾಂಡ? ಡಾ. ಬಸವರಾಜ ಸಾದರ.

 
 
 
ಅಹಮಧಿಕಾರ

ಅಂಧಾಧಿಕಾರದ ಆಪ್ತ ಗೆಳೆಯ ಅಹಂಕಾರ, ತಲೆಗೇರಿದರೆ ಇರಲುಂಟೆ ಯಾರದಾದರೂ ದರಕಾರ; ಎಷ್ಟೊಂದಿವೆ ಪಾಠ ಇತಿಹಾಸದುದ್ದ? ಅರಿಯದವರಿಗೆ ಅವನತಿಯೇ ಗತಿ, ಬದುಕಿನುದ್ದ. ಡಾ....

 
 
 

Comments


©Alochane.com 

bottom of page