ಶ್ರೀ ದೇವಿದಾಸ ಜಿ. ಭಟ್ಟ ಇವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಗ್ರಾಮದವರು. ಅಂಕೋಲೆಯ ಗೋಖಲೆ ಕಾಲೇಜಿನಲ್ಲಿ ಪದವಿ ಪಡೆದು ತದನಂತರ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ, ಸಂಗೀತ, ನಾಟಕ ಹಾಗೂ ಯಕ್ಷಗಾನ ಮುಂತಾದ ಲಲಿತ ಕಲೆಗಳಲ್ಲಿ ಅಪಾರ ಆಸಕ್ತಿ ಹೊಂದಿರುವ ಇವರು ಉತ್ತಮ ಕಲಾವಿದರಾಗಿದ್ದು ನಾಟಕಗಳಲ್ಲಿ ಇವರ ನಟನೆಗೆ ಪ್ರಶಸ್ತಿಗಳು ದೊರಕಿವೆ. ಅಗಾಗ ಪತ್ರಿಕೆಗಳಿಗೆ ಬರೆಯುವ ಹವ್ಯಾಸ ಹೊಂದಿರುವ ಇವರಿಗೆ ಮಿತ್ರರ ದೊಡ್ಡ ಬಳಗವೇ ಇದೆ. ಪ್ರಸ್ತುತದಲ್ಲಿ ಶ್ರೀಯುತರು ಬೆಂಗಳೂರಿನಲ್ಲಿ ವಾಸವಾಗಿದ್ದು ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.